ಬೆಂಗಳೂರು: ಮಾಜಿ ಸಂಸದ ಧೃವನಾರಾಯಣ್ ಅವರು ಚಾಮರಾಜನಗರ ಜಿಲ್ಲೆ ಕಾಂಗ್ರೆಸ್ ಪರವಾಗಿ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ 10 ಲಕ್ಷ ರುಪಾಯಿ ಚೆಕ್ ಅನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಬೆಂಗಳೂರಿನಲ್ಲಿ ಬುಧವಾರ ನೀಡಿದರು. ಈ ಸಂದರ್ಭದಲ್ಲಿ ಶಾಸಕರಾದ ಪುಟ್ಟರಂಗಶೆಟ್ಟಿ, ಆರ್. ನರೇಂದ್ರ, ಮಾಜಿ ಸಂಸದ ಶಿವಣ್ಣ, ಮಾಜಿ ಶಾಸಕ ಕೆ. ಬಾಲರಾಜ್, ಜಿಲ್ಲಾಧ್ಯಕ್ಷ ಮರಿಸ್ವಾಮಿ ಇದ್ದರು.
ಭದ್ರಾವತಿ ಆಕಾಶವಾಣಿ ವಜ್ರ ಮಹೋತ್ಸವ ಸಂಭ್ರಮ
ವಿಜಯ ಸಂಘರ್ಷ ಭದ್ರಾವತಿ: ಆಕಾಶವಾಣಿ ಭದ್ರಾವತಿ ಕೇಂದ್ರದ ವಜ್ರ ಮಹೋತ್ಸವ ವರ್ಷ ಆರಂಭದ ಹಿನ್ನೆಲೆ ಯಲ್ಲಿ ಕೇಂದ್ರದ ಆವರಣದಲ್ಲಿ ಕೇಳುಗ ರೊಂದಿಗೆ ಆಯೋಜಿಸಿದ್ದ ಸಂಭ್ರಮ ಆಚರಣೆ ಕಾರ್ಯಕ್ರಮದ ಮುನ್ನುಡಿ ಯಶಸ್ವಿಯಾಗಿ ಜರುಗಿತು. ಭದ್ರಾವತಿ ಆಕಾಶವಾಣಿ ಕೇಂದ್ರವು 60ನೇ ವರ್ಷಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕುಲಪತಿ ಪ್ರೊ.ಎಸ್.ವೆಂಕಟೇಶ್ ಅವರು ವಿಶ್ವಜ್ಞಾನಿ ಅಂಬೇಡ್ಕರ್ ಕುರಿತು ಪ್ರಸಾರವಾದ ಸರಣಿಯ ಪ್ರಶ್ನೆಗೆ ಸರಿ ಉತ್ತರ ನೀಡಿದ 45 ವಿಜೇತರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಪ್ರೊ. ಎಸ್.ವೆಂಕಟೇಶ ಏ: 14 ರಿಂದ ವರ್ಷಪೂರ್ತಿ ಅಂಬೇಡ್ಕರ್ ವಿಚಾರಧಾರೆಯನ್ನು ಆಕಾಶವಾಣಿ ಸಹಯೋಗದಲ್ಲಿ ಪ್ರಸಾರ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ವಜ್ರ ಮಹೋತ್ಸವದ ಪ್ರಯುಕ್ತ ಮಹಿಳೆಯರಿಗೆ ಅಡುಗೆ ಕಾರ್ಯಕ್ರಮ, ಮಕ್ಕಳಿಗೆ ಪಂಚತಂತ್ರ ಕಥೆ, ಶಿವಮೊಗ್ಗ ಪ್ರವಾಸಿತಾಣ ಪರಿಚಯ, ಸಿನಿಪ್ರಿಯರಿಗೆ ಚಿತ್ರಲಹರಿ, ಯುವಕರಿಗೆ ವೃತ್ತಿ ಮಾರ್ಗದರ್ಶನವನ್ನು ಒಳಗೊಂಡ ಹೊಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗು ವುದು ಎಂದು ತಿಳಿಸಿದರು. ಕೇಳುಗರ ಪರವಾಗಿ. ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಉಮೇಶ್ ದಾವಣಗೆರೆ, ಅಥಣಿಯಿಂದ ಶ್ರೀಶೈಲ ತೇಲಿ, ಕಲ್ಬುರ್ಗಿ ಮಹೇಶ್ ಹಿಪ್ಪರಿಗಿ, ನ್ಯಾಮತಿ ಹಂಪಣ್ಣ. ಹಾಗೂ ಆಕಾಶವ...
Comments
Post a Comment