Posts

Showing posts from June, 2023

ಯುವ ಸಮೂಹವನ್ನು ಅಪಾಯದಿಂದ ಪಾರು ಮಾಡಬೇಕಿದೆ

Image
ವಿಜಯ ಸಂಘರ್ಷ ಭದ್ರಾವತಿ : ಈ ಹಿಂದೆ ಗಂಧದ ನಾಡಾಗಿದ್ದ ಮಲೆನಾಡು ಈಗ ಗಾಂಜಾ ನಾಡಾಗಿ ಬದಲಾಗುತ್ತಿದೆ. ಯುವಸಮೂಹವನ್ನು ಅಪಾಯದಿಂದ ಪಾರು ಮಾಡಬೇಕಿದೆ ಎಂದು ಪ್ರಕೃತಿ ವಿಕೋಪ ಅಧ್ಯಯನ ತಜ್ಞ ಡಾ. ವಿ.ಎಲ್.ಎಸ್. ಕುಮಾರ್ ಆತಂಕ ವ್ಯಕ್ತಪಡಿಸಿದರು. ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ದಿ. ಚನ್ನಬಸಪ್ಪ ಕಡೂರಳ್ಳಿ ದತ್ತಿ ಉಪನ್ಯಾಸ ಕಾರ್ಯಕ್ರಮ ದಲ್ಲಿ ಅವರು ಮಾತನಾಡಿದರು. ವಾತಾವರಣದಲ್ಲಿ ನಿತ್ಯದ ಬದಲಾವಣೆ ಗಮನಿಸಿದರೆ ಮುಂದಿನ 50 ವರ್ಷಗಳಲ್ಲಿ ಭೂಮಿ ಮೇಲೆ ಮನುಷ್ಯ ವಾಸಿಸಲು ಕಷ್ಟ ವಾಗಲಿದೆ‌. ಒಂದು ಮರ ನಾಲ್ಕು ಜನರಿಗೆ ಆಮ್ಲ ಜನಕ ಒದಗಿಸುತ್ತದೆ. ಗಾಳಿ, ಬೆಳಕು, ನೀರು, ಆಹಾರ, ಸಸ್ಯ ಎಲ್ಲವನ್ನೂ ಒಳಗೊಂಡ ಪರಿಸರವೇ ದೇವರು. ಅದು ನಮಗೆ ಬದುಕಲು ಎಲ್ಲಾ ಕೊಡುತ್ತದೆ. ಅದನ್ನು ಸಂರಕ್ಷಿಸಲು ನಾವೇನು ನೀಡುತ್ತಿದ್ದೇವೆ ಎಂದು ಪ್ರಶ್ನಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಜ್ಯೋತಿ ಬೆಳಗಿಸಿ ಉದ್ಘಾ ಟಿಸಿದರು. ಪ್ರಿನ್ಸಿಪಾಲ್ ಪ್ರೊ. ರಾಜಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಭದ್ರಾವತಿ ತಾಲೂಕು ಕಸಾಪ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಹೊಳೆಹೊನ್ನೂರು ಹೋಬಳಿ ಕಸಾಪ ಅಧ್ಯಕ್ಷ ಸಿದ್ದಪ್ಪ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ಭಾರತಿ ದೇವಿ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ರುದ್ರಮುನಿ ನಿರ...

ಕಾಂಗ್ರೆಸ್ ಪಕ್ಷ ಘೋಷಿಸಿರುವ ಯೋಜನೆ ಗಳ ಕುರಿತು ಟೀಕೆ ಮಾಡುವುದರಲ್ಲಿ ಅರ್ಥವಿಲ್ಲ: ಬಿ.ಕೆ.ಮೋಹನ್

Image
ವಿಜಯ ಸಂಘರ್ಷ ಭದ್ರಾವತಿ: ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್‌ನಲ್ಲಿ ಘೋಷಿಸಿರುವ ಯೋಜನೆ ಗಳ ಕುರಿತು ಟೀಕೆ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ, ಸಿಎಂ ಸಿದ್ದ ರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ನಗರಸಭೆ ಸದಸ್ಯ ಬಿ.ಕೆ ಮೋಹನ್ ಹೇಳಿದರು. ಅವರು ಭಾನುವಾರ ನಗರದಕೆಎಸ್‌ಆರ್‌ ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ರಾಜ್ಯಾದ್ಯಂತ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆ ಉದ್ಘಾಟಿಸಿ ಮಾತನಾಡಿದರು. ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಜೂ.11 ಮಹಿಳೆಯರು ಸಂಭ್ರಮಿಸುವ ದಿನವಾಗಿದೆ. ಸಿಎಂ ಸಿದ್ದರಾಮಯ್ಯ ನವರು ಆಡಳಿತದಲ್ಲಿ ಹೆಚ್ಚಿನ ಅನುಭವ ಹೊಂದಿ ದ್ದಾರೆ. ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ನುಡಿ ದಂತೆ ನಡೆಯಲಾಗುತ್ತಿದೆ. ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕರೆ ನೀಡಿದರು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸದಸ್ಯರಾದ ಚನ್ನಪ್ಪ, ಗೀತಾ ರಾಜ್‌ಕುಮಾರ್, ಲತಾ ಚಂದ್ರಶೇಖರ್, ಶೃತಿ ವಸಂತ್, ಮಹಮದ್ ಯೂಸಫ್, ಉಪತಹಸೀಲ್ದಾರ್ ಮಂಜನಾಯ್ಕ, ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ರಂಗನಾಥ್ ಅಂತರಗಟ್ಟಿ,ಕಾಂಗ್ರೆಸ್ ಮುಖಂಡರಾದ ಎಚ್.ಎಲ್ ಷಡಾಕ್ಷರಿ, ಬಿ.ಕೆ ಜಗನ್ನಾಥ್, ಎಸ್. ಮಣಿಶೇಖರ್...

ಜೂ.10ರಂದು ಶಕ್ತಿ ಯೋಜನೆ ಉದ್ಘಾಟನೆ

ಭದ್ರಾವತಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಿವಮೊಗ್ಗ ವಿಭಾಗದ ಭದ್ರಾವತಿ ಘಟಕದಲ್ಲಿ ರಾಜ್ಯ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ರಾಜ್ಯಾದ್ಯಂತ ಮಹಿಳೆ ಯರಿಗೆ ನಗರ ಸಾರಿಗೆ, ಸಾಮಾನ್ಯ ಹಾಗು ವೇಗದೂತ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಶಕ್ತಿ ಯೋಜನೆ ಉದ್ಘಾಟನೆ ಜೂ.11ರಂದು ಮಧ್ಯಾಹ್ನ 12.30ಕ್ಕೆ ನಗರದ ಮುಖ್ಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ನಡೆಯಲಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಲಿದ್ದು, ಉಪವಿಭಾಗಾ ಧಿಕಾರಿ ರವಿಚಂದ್ರನಾಯಕ್, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ತಹಸೀಲ್ದಾರ್ ಸುರೇಶ್ ಆಚಾರ್, ಪೊಲೀಸ್ ಉಪಾಧೀಕ್ಷಕ ಜಿತೇಂದ್ರ ಕುಮಾರ್ ದಯಾಮ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಪೌರಾಯುಕ್ತ ಮನುಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿ ಸುವಂತೆ ಘಟಕ ವ್ಯವಸ್ಥಾಪಕಿ ಅಂಬಿಕಾ ಸುಧೀರ್ ಕೋರಿದ್ದಾರೆ.